BREAKING : ಭಾರತದ 12 ಯುವಕರನ್ನು ಉಕ್ರೇನ್‌ ವಿರುದ್ಧ ಯುದ್ದಕ್ಕೆ ಕಳುಹಿಸಿದ ರಷ್ಯಾ ; ಸಂಕಷ್ಟದಲ್ಲಿ ಮೂವರು ಕನ್ನಡಿಗರು

ಕಲಬುರಗಿಯ : ಉಕ್ರೇನ್ ವಿರುದ್ಧದ ಯುದ್ದಕ್ಕೆ ಕನ್ನಡಿಗರ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕಲಬುರಗಿಯ ಮೂವರು ಯುವಕರು ಸಂಕಷ್ಟದಲ್ಲಿದ್ದಾರೆ.

ಉದ್ಯೋಗದ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ 12 ಭಾರತೀಯ ಯುವಕರನ್ನು ಉಕ್ರೇನ್ ವಿರುದ್ಧದ ಯುದ್ದಕ್ಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. 12 ಮಂದಿ ಯುವಕರ ಪೈಕಿ ಮೂವರು ಕಲಬುರಗಿಯವರು ಎಂದು ತಿಳಿದು ಬಂದಿದೆ.

12 ಮಂದಿ ಯುವಕರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಬೇಕು ಎಂದು ಕೇಂದ್ರ ಸರ್ಕಾರವನ್ನು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಒತ್ತಾಯಿಸಿದ್ದಾರೆ. ರಷ್ಯಾದಲ್ಲಿ ಸಿಲುಕಿದವರಲ್ಲಿ ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಯುವಕರು ಸೇರಿದ್ದಾರೆ. ಪ್ರಧಾನಿ ಜೋದಿ ಹಾಗೂ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ರಷ್ಯಾದೊಂದಿಗೆ ಮಾತುಕತೆ ನಡೆಸಿ ಯುವಕರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಾಂದರ್ಭಿಕ ಚಿತ್ರ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read