ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಣಿ ಸೇಡಿನ ಹತ್ಯೆ, ಕೋಮು ಹಿಂಸಾಚಾರದ ವಿರುದ್ಧ ಜನರಿಂದ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.
ಮಂಗಳೂರು ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಎಸ್ಪಿಯಾಗಿ ಅರುಣ್ ಕೆ. ಅವರನ್ನು ನೇಮಿಸಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮಾ ಅಗರವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ಪೋಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ. ಅರುಣ್ ಅವರನ್ನು ನೇಮಕ ಮಾಡಲಾಗಿದೆ.