ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಮತ್ತು ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
“ನಾಡೋಜ ಡಾ: ಮಹೇಶ್ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜ್ಯ ಶಿಷ್ಟಾಚಾರ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.
