BREAKING : ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದ್ದು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಹೌದು, ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಸರ್ಕಾರಕ್ಕೆ ಭಾರಿ ತಲೆನೋವಾಗಿದ್ದು, ವಿಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸುವ ಹಿನ್ನೆಲೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read