BREAKING : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಕತ್ತು ಕೊಯ್ದು ಹತ್ಯೆ ಕೇಸ್  : ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಘ್ನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ . ಹಾಗೂ ವಿಘ್ನೇಶ್ ಸ್ನೇಹಿತ ಹರೀಶ್ ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ವಿಘ್ನೇಶ್ ನನ್ನು ಸ್ನೇಹಿತ ಹರೀಶ್ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದನು. ಕಾರ್ಯಾಚರಣೆ ನಡೆಸಿದ ಪೊಲೀಸರು ಸೋಲದೇವನಹಳ್ಳಿಯ ಮನೆಯೊಂದರಲ್ಲಿ ಅಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿ ವಿಘ್ನೇಲಶ್ ಅಟ್ಟಹಾಸಕ್ಕೆ ಯುವತಿ ಬರ್ಬರವಾಗಿ ಕೊಲೆಯಾಗಿದ್ದಾಳೆ. ಪ್ರೀತಿ ನಿರಾಕರಿಸಿದ್ದಕ್ಕೆ ವಿಘ್ನೇ್ಶ್ ಯುವತಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಲ್ಲೇಶ್ವರಂ ನಲ್ಲಿ ನಡೆದಿದೆ.

ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರಾಕ್ ಬಳಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವತಿ ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಕತ್ತು ಕೊಯ್ದು ಹತ್ಯೆಗೈದಿದ್ದಾನೆ.

20 ವರ್ಷದ ಯಾಮಿನಿಪ್ರಿಯಾ ಕೊಲೆಯಾದ ಯುವತಿ. ಯುವತಿ ಕಾಲೇಜು ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಬಂದ ಆರೋಪಿ ಖಾರದಪುಡಿ ಎರಚಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದನು. ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read