ಮಂಗಳೂರು: ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಪೆಯ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್(59) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳ ಜೊತೆ ಸೇರಿ ಸುಹಾಸ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಅಬ್ದುಲ್ ರಜಾಕ್ ನನ್ನು ಬಂಧಿಸಲಾಗಿದೆ.
ಅಲ್ಲದೆ ಆರೋಪಿಗಳು ತಲೆಮರೆಸಿಕೊಳ್ಳಲು ಅಬ್ದುಲ್ ರಜಾಕ್ ಸಹಾಯ ಮಾಡಿದ ಆರೋಪವಿದೆ. ಪ್ರಮುಖ ಆರೋಪಿ ಮುಜಾಮಿಲ್ ತಂದೆಯಾಗಿರುವ ಅಬ್ದುಲ್ ರಜಾಕ್ ನನ್ನು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಚು ರೂಪಿಸಿದ್ದು ಮತ್ತು ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.