BREAKING : ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ : ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.

ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಆಯ್ಕೆ ಸಮಿತಿಯ ಸಭೆಯ ನಂತರ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ “ಈ ಸಮಿತಿಯಲ್ಲಿ, ಸರ್ಕಾರಕ್ಕೆ ಬಹುಮತವಿದೆ. ಕೇರಳದ ಕುಮಾರ್ ಮತ್ತು ಪಂಜಾಬ್ ನ ಬಿ.ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿರುವಾಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಹಾಯ ಮಾಡಲು ಇಬ್ಬರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯ ಭಾಗವಾಗಿದ್ದರು. ಪ್ರಧಾನಿ ಮತ್ತು ಚೌಧರಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಭಾಗವಹಿಸಿದ್ದರು.

ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯ ಬದಲಿಗೆ ಕೇಂದ್ರ ಸಚಿವರನ್ನು ನೇಮಿಸಿದ ಕಾನೂನಿನ ಬಗ್ಗೆ ಕಾಂಗ್ರೆಸ್ ನಾಯಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು. “ಭಾರತದ ಮುಖ್ಯ ನ್ಯಾಯಮೂರ್ತಿ ಈ ಸಮಿತಿಯಲ್ಲಿ ಇರಬೇಕಿತ್ತು” ಎಂದು ಅವರು ಹೇಳಿದರು.

https://twitter.com/ANI/status/1768187448557740535?ref_src=twsrc%5Etfw%7Ctwcamp%5Etweetembed%7Ctwterm%5E1768187448557740535%7Ctwgr%5E0ae5332569e0d062752853b0845c0083953ee383%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-news-bureaucrats-sukhbir-sandhu-gyanesh-kumar-appointed-new-election-commissioners%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read