BREAKING : ತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಮೃತರ ಕುಟುಂಬಸ್ಥರಿಗೆ ತಲಾ 3 ಲಕ್ಷ ಪರಿಹಾರ ಘೋಷಣೆ

ಚೆನ್ನೈ: ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಮಂದಿ ಮೃತಪಟ್ಟಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.ಅಪ್ರಾಪ್ತ ಬಾಲಕಿ ಸೇರಿದಂತೆ ಸಂತ್ರಸ್ತರ ಕುಟುಂಬಗಳಿಗೆ ಸಿಎಂ ಸಹಾನುಭೂತಿ ವ್ಯಕ್ತಪಡಿಸಿದರು. 

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ (ಸಿಎಂಪಿಆರ್ಎಫ್) ಮೂರು ಲಕ್ಷ ರೂ.ಗಳ ಪರಿಹಾರವನ್ನು ಸ್ಟಾಲಿನ್ ಘೋಷಿಸಿದ್ದಾರೆ.ಗಂಭೀರ ಗಾಯಗಳೊಂದಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ಒಂದು ಲಕ್ಷ ರೂ., ಸಣ್ಣಪುಟ್ಟ ಗಾಯಗಳಾಗಿರುವ ವ್ಯಕ್ತಿಗಳಿಗೆ 50,000 ರೂ. ನೀಡುವುದಾಗಿ ಘೋಷಿಸಲಾಗಿದೆ.

ಹತ್ತಿರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಹೇಳಿದರು.ಪ್ರಸ್ತುತ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಗುರುವಾರ ರಾತ್ರಿ 9.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read