BREAKING: ಆಸ್ತಿ ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಜಮೀನಿನಲ್ಲೇ ಸೋದರನ ಹತ್ಯೆಗೈದ ಶಿಕ್ಷಕ

ಹಾಸನ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಸೋದರನನ್ನು ಕೊಲೆ ಮಾಡಲಾಗಿದೆ. 46 ವರ್ಷದ ದಯಾಕರ್ ಅವರನ್ನು ಜಮೀನಿನಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸೋಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆಯ ಕಾಲದ ಆಸ್ತಿಯಲ್ಲಿ ಪಾಲು ಸಂಬಂಧ ದಾಯಾದಿಗಳ ನಡುವೆ ಕಲಹ ಉಂಟಾಗಿತ್ತು.

ಆಸ್ತಿಯಲ್ಲಿ ಹೆಚ್ಚಿನ ಪಾಲು ಕೇಳಿ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದ. ಕೇಸ್ ವಿಚಾರಣೆಯ ವೇಳೆ ಆಸ್ತಿ ಕೈ ತಪ್ಪುವ ಭೀತಿಯಿಂದ ದಯಾಕರ್ ಅವರನ್ನು ಹತ್ಯೆ ಮಾಡಲಾಗಿದೆ. ತಮ್ಮ ವಶದಲ್ಲಿದ್ದ ಜಮೀನಿನಲ್ಲಿ ಬೆಳೆದಿದ್ದ ಸಿಲ್ವರ್ ಮರಗಳನ್ನು ಕಡಿಸುತ್ತಿದ್ದ. ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿರುವ ಹಿನ್ನೆಲೆ ಮರ ಕಡಿಯದಂತೆ ಒತ್ತಾಯ ಮಾಡಲಾಗಿತ್ತು.

ತಡೆಯಲು ಮುಂದಾದ ದಯಾಕರ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದೆ. ಜಮೀನಿನಲ್ಲಿ ದಯಾಕರ್ ನನ್ನು ಶಿಕ್ಷಕ ರಾಜಶೇಖರ್ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಪರಾರಿಯಾಗಿದ್ದಾನೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇಸ್ ದಾಖಲಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read