BREAKING : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ; ಗುಡಿಸಲಿಗೆ ಲಾರಿ ನುಗ್ಗಿ ಒಂದೇ ಕುಟುಂಬದ 8 ಮಂದಿ ಸಾವು..!

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗುಡಿಸಲಿಗೆ ಲಾರಿ ನುಗ್ಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಮರಳು ಸಾಗಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಟ್ರಕ್ ಪಲ್ಟಿಯಾದ ನಂತರ ಚೆಲ್ಲಿದ ಮರಳಿನ ಅಡಿಯಲ್ಲಿ ರಸ್ತೆ ಬದಿಯಲ್ಲಿ ವಾಸಿಸುತ್ತಿದ್ದ ಇಡೀ ಕುಟುಂಬ ಹೂತುಹೋಗಿದೆ.

ಮರಳು ಮತ್ತು ಟ್ರಕ್ ಅನ್ನು ತೆಗೆದು, ಅದರ ಅಡಿಯಲ್ಲಿ ಹೂತುಹೋದ ಜನರನ್ನು ಹೊರತೆಗೆಯುವ ಹೊತ್ತಿಗೆ, ನಾಲ್ಕು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read