BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ಕಳ್ಳರ ಕೈಚಳಕ: 300ಕ್ಕೂ ಅಧಿಕ ಮಂದಿ ಮೊಬೈಲ್ ಕಳವು

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಕಳ್ಳರು ಕೈಚಳಕ ತೋರಿಸಿದ್ದು, 300ಕ್ಕೂ ಹೆಚ್ಚು ಮೊಬೈಲ್ ಕಳವು ಮಾಡಲಾಗಿದೆ.

ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆ ಅವಧಿಯಲ್ಲಿ 300ಕ್ಕೂ ಅಧಿಕ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ಮೆರವಣಿಗೆ ವೇಳೆಯಲ್ಲಿ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ಯುವಕರು, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕೃತ್ಯ ಎಸಗಿದೆ.

ಆ್ಯಪ್ ಮೂಲಕ ಮೊಬೈಲ್ ಕಳೆದುಕೊಂಡವರು ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಗೆ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿಕೊಡಲು ಮನವಿ ಮಾಡಿಕೊಂಡಿದ್ದಾರೆ. ಬೆಳಗ್ಗೆಯಿಂದ 300ಕ್ಕೂ ಹೆಚ್ಚು ಜನರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳಗಾವಿಯ ಕಡೆ ಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗಳಿಗೆ ದೂರು ಸಲ್ಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read