ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.
ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಸೇರಿ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಹಾರ ಮತದಾರರು ಎನ್.ಡಿ.ಎ. ಬೆಂಬಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿಗೆ ಕಾರಣರಾದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಧನ್ಯವಾದಗಳು. ಬಿಹಾರ ಮತದಾರರು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಬಿಹಾರದ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಶ್ರಮಿಸಲಿದೆ. ದೇಶದ ಜನರು ಮೋದಿಯವರ ಮೇಲೆ ಆಚಲ ನಂಬಿಕೆ ಹೊಂದಿದ್ದಾರೆ. ಇದಕ್ಕೆ ಬಿಹಾರ ಚುನಾವಣೆಯ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.
ಎಲ್ಲಾ ಕಾರ್ಯಕರ್ತರ ಪರವಾಗಿ, ಬಿಹಾರದ ಜನರು ನೀಡಿದ ಅದ್ಭುತ ಜನಾದೇಶಕ್ಕಾಗಿ ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಈ ಫಲಿತಾಂಶಗಳು ಇದು ಸುನಾಮಿ ಎಂದು ಸೂಚಿಸುತ್ತವೆ. ಬಿಹಾರದ ಜನರಾಗಲಿ ಅಥವಾ ದೇಶದ ಜನರಾಗಲಿ, ಪ್ರತಿಯೊಬ್ಬರೂ ಪ್ರಧಾನ ಮಂತ್ರಿಯ ಮೇಲೆ ಅಚಲ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯಲು ಅಭಿವೃದ್ಧಿಯ ರಾಜಕೀಯಕ್ಕೆ ಅವರು ಅನುಮೋದನೆಯ ಮುದ್ರೆ ಹಾಕಿದ್ದಾರೆ ಎಂಬುದನ್ನು ಈ ಸುನಾಮಿ ಸ್ಪಷ್ಟಪಡಿಸಿದೆ. ಈ ಚುನಾವಣೆ ಅಭಿವೃದ್ಧಿ ಮತ್ತು ಜಂಗಲ್ ರಾಜ್ ನಡುವೆ ನಡೆಯಿತು ಮತ್ತು ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.
#BiharElections | Delhi: Union Minister and BJP National President JP Nadda says, "…On behalf of all workers, I extend my heartfelt congratulations and gratitude to the people of Bihar for the resounding mandate they have given. These results indicate that this is a tsunami.… pic.twitter.com/TWMfynXcKj
— ANI (@ANI) November 14, 2025
