ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಬಹಳ ಕುತೂಹಲ ಮೂಡಿಸಿದೆ. ಪರ ವಿರೋಧದ ನಡುವೆ ಜಾತಿ ಗಣತಿ ವರದಿ ಮಂಡನೆಯಾಗುತ್ತಿದ್ದು, ಜಾತಿ ಗಣತಿಯಲ್ಲೇನಿದೆ ಎಂಬುದು ಬಹಿರಂಗವಾಗುವ ಕಾಲ ಸನ್ನಿಹಿತವಾಗಿದೆ. ಇದರ ಜೊತೆ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ.
TAGGED:ಸಚಿವ ಸಂಪುಟ ಸಭೆ