BREAKING : ರಾಯಚೂರಿನಲ್ಲಿ ಘೋರ ದುರಂತ ; ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ‘PWD’ ಅಧಿಕಾರಿಗಳು ಸಾವು.!

ರಾಯಚೂರು : ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ಅಧಿಕಾರಿಗಳು ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು ಬಳಿ ನಡೆದಿದೆ.

ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿ ಬಳಿ  ಈ  ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಅಧಿಕಾರಿಗಳ ಮೇಲೆ ಲಾರಿ ಪಲ್ಟಿಯಾಗಿದೆ.

ಲಾರಿ ಪಲ್ಟಿಯಾಗಿ ಮಲ್ಲಿಕಾರ್ಜುನ, ಶಿವರಾಜು , ಮೆಹಬೂಬ ಎಂಬುವವರು ಮೃತಪಟ್ಟಿದ್ದಾರೆ.ನಿನ್ನೆ ರಾತ್ರಿ ಮೂವರು ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ದಾರಿಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬಂದ ಹೊಟ್ಟು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಕೆಳಗೆ ಸಿಲುಕಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಘಟನೆ ಸಂಬಂಧ ಲಾರಿ ಚಾಲಕನನ್ನು ಸಿಂಧನೂರು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read