BREAKING : ಬೆಂಗಳೂರಿನಲ್ಲಿ ಸುಲಿಗೆಗೆ ಇಳಿದಿದ್ದ `ಮಂಗಳಮುಖಿ’ಯರು ಅರೆಸ್ಟ್

ಬೆಂಗಳೂರು : ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಮೂವರು ಮಂಗಳಮುಖಿಯರನ್ನು ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಆಟೋ ಡ್ರೈವರ್ ಹಾಗೂ ಮೂವರು ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ನೇಹಾ, ಅವಿಷ್ಕಾ, ದೀಪಿಕಾ ಹಾಗೂ ಪ್ರಕಾಶ್ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಕೋಡಿಗೇಹಳ್ಳಿ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದ ಆರೋಪಿಗಳು ನಿನ್ನೆ ರಾತ್ರಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಬೇರೆ ಬೇರೆ ಠಾಣಾ ವ್ಯಾಪ್ತಿಯಲ್ಲೂ ಕೂಡ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read