BREAKING : ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ : ಹೈಕೋರ್ಟ್

ಬೆಂಗಳೂರು : ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ ಎಂದು ಹೈಕೋರ್ಟ್ ( High court) ಹೇಳಿದೆ.

ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ನಟ ದರ್ಶನ್ ಪರ ಸಿವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ಆರೋಗ್ಯದ ದೃಷ್ಟಿಯಿಂದ ನಟ ದರ್ಶನ್ ಗೆ ಜಾಮೀನು ನೀಡಬೇಕೆಂದು ವಕೀಲ ಸಿವಿ ನಾಗೇಶ್ ಮನವಿ ಮಾಡಿದ್ದಾರೆ.

. ಡಿಕೆ ಶಿವಕುಮಾರ್ ಅವರಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದೆ. ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್ ಜಡ್ಜ್ ಮುಂದೆ ಸಮಸ್ಯೆ ಆದರೆ ಅದನ್ನು ಸರಿಪಡಿಸಲಾಗುವುದಿಲ್ಲ , ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದರು. ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ಜಡ್ಜ್ ಲಾಯರ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ‘ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದರು.ನೀವು ವೈದ್ಯಕೀಯ ವರದಿ ಪ್ರಶ್ನಿಸುತ್ತಿದ್ದೀರಾ ಎಂದು ಜಡ್ಜ್ ಎಸ್ ಪಿಪಿ ಪ್ರಸನ್ನ ಕುಮಾರ್ ಗೆ ಕೇಳಿದ್ದಾರೆ.

ವಾದ ಮುಂದುವರೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read