BREAKING : ‘ವಕ್ಫ್ ವಿವಾದ’ : ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳ ರದ್ದಿಗೆ CM ಸಿದ್ದರಾಮಯ್ಯ ಆದೇಶ.!

ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ವಕ್ಫ್ ಮಂಡಳಿ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕು.ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read