ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 60 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃತ್ಪೂರ್ವಕ ಸಂತಾಪಗಳು, ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ” ಎಂದು ಜಿ ಕಿಶನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್, ಪಶ್ಚಿಮ ಬಂಗಾಳವನ್ನು ಅಸ್ಸಾಂ ಮತ್ತು ತ್ರಿಪುರದೊಂದಿಗೆ ಸಂಪರ್ಕಿಸುತ್ತದೆ. ರೈಲು ಸಂಖ್ಯೆ 13174 ಕಾಂಚನಜುಂಗಾ ಎಕ್ಸ್ಪ್ರೆಸ್ ಅಗರ್ತಲಾದಿಂದ ಸೀಲ್ದಾಹ್ಗೆ ಪ್ರಯಾಣಿಸುತ್ತಿದ್ದು, ರಂಗಪಾಣಿ ಮತ್ತು ಚಥರ್ಹತ್ ನಿಲ್ದಾಣದ ಮಧ್ಯೆ ಅಪಘಾತಕ್ಕೀಡಾಗಿ ಹಳಿ ತಪ್ಪಿದೆ.
https://twitter.com/Lucknowalaa/status/1802565293799014892?ref_src=twsrc%5Etfw%7Ctwcamp%5Etweetembed%7Ctwterm%5E1802565293799014892%7Ctwgr%5E53051c4e58033dad870046ecec7d200c1697a8df%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fudayavani-epaper-dh93f3fa93d15a477e87db2b32d6c0b8c3%2Ftrainmishapkaanchanajungaekspresgedikkihodedhagudsrailuhalavarigegaaya-newsid-n618062418