ರಾಯಚೂರು: ಕೃಷ್ಣಾ ನದಿ ಸೇತುವೆ ಮೇಲಿಂದ ಪತಿಯನ್ನು ತಳ್ಳಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಮಹಿಳಾ ಠಾಣೆ ಪೊಲೀಸರು ಪತಿ ತಾತಪ್ಪ ಅವರನ್ನು ಬಂಧಿಸಿದ್ದಾರೆ.
ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯಡಿ ದಾತಪ್ಪನ ವಿರುದ್ಧ ಪ್ರಕರಣ ದಾಖಲಾಗಿದ್ದು, 16 ವರ್ಷದ ಅಪ್ರಾಪ್ತೆಯನ್ನು ಆರೋಪಿ ಪತಿ ತಾತಪ್ಪ ಮದುವೆಯಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯ ಕೊಲೆಗೆ ಪತ್ನಿ ಯತ್ನಿಸಿದ ಆರೋಪ ಕೇಳಿ ಬಂದಿತ್ತು.
ಕೊಲೆ ಯತ್ನ ಪ್ರಕರಣದ ತನಿಖೆಯ ವೇಳೆ ಬಾಲ್ಯ ವಿವಾಹವಾಗಿರುವುದು ಬಹಿರಂಗವಾಗಿದ್ದು, ಈ ಸಂಬಂಧ ತಾತಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.