ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶಾಲಾಕ್ಷಿ ಹಿರೇಮಠ ಮೃತಪಟ್ಟವರು. ಮನೆಯ ರೂಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿಶಾಲಾಕ್ಷಿ ಶವ ಪತ್ತೆಯಾಗಿದೆ. 14 ವರ್ಷದ ಹಿಂದೆ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮ್ಯಾನೇಜರ್ ಶಂಭುಲಿಂಗಯ್ಯ ಜೊತೆಗೆ ವಿಶಾಲಾಕ್ಷಿ ಅವರ ಮದುವೆಯಾಗಿತ್ತು. ವಿಶಾಲಾಕ್ಷಿ ಅವರು ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕುಂದೂರು ನೀರಲಗಿ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.