BREAKING : ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣ : ಕನ್ನಡತಿ ನಟಿ ವೀಣಾ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ನಟಿ ‘ವೀಣಾ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕನ್ನಡತಿ ಸೀರಿಯಲ್ ನಟಿ ಮದುವೆಯಾಗಲು ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮದನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹಲವು ದಿನಗಳಿಂದ ಲೀವಿಂಗ್ ರಿಲೇಶನ್ಶಿಪ್ನಲ್ಲಿದ್ದರು.

ಸೀರಿಯಲ್ ನಟಿ ವೀಣಾರನ್ನು ಪರಿಚಯ ಮಾಡಿಕೊಂಡಿದ್ದ ಯುವಕ ಆಕೆ ಜೊತೆ ಪಾರ್ಟಿ ಕೂಡ ಮಾಡಿದ್ದನು ಎಂದು ಹೇಳಲಾಗಿದೆ. ನಟಿ ಮದುವೆಗೆ ಒಪ್ಪದ ಹಿನ್ನೆಲೆ ಮದನ್ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಪಾರ್ಟಿಯಲ್ಲಿ ಮದನ್ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ, ಆದರೆ ಇದಕ್ಕೆ ವೀಣಾ ನೋ ಎಂದಿದ್ದಾಳೆ. ಇದರಿಂದ ಮನನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read