BUDGET BREAKING : ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ : ಮಾಸಾಶನ ಮೊತ್ತ 2500 ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರ ಕಲಾವಿದರಿಗೆ ಗುಡ್ ನ್ಯೂಸ್ ನೀಡಿದ್ದು, ಮಾಸಾಶನ 2500 ರೂ.ಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಿಂದ ಕಲಾವಿದರಿಗೆ ನೀಡುತ್ತಿರುವ ಮಾಸಾಶನ ಮೊತ್ತ 2000 ರೂನ್ನು 2500 ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ರಾಜ್ಯದ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿನಿಮಾಗೆ 200 ರೂ.ದರ ನಿಗದಿಗೊಳಿಸಿದೆ.

ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read