ಬೆಂಗಳೂರು : ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ವಾರದಲ್ಲಿ 2 ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ. ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.