ಬಸ್-ಬೈಕ್ ನಡುವೆ ಅಪಘಾತ: ತಾಯಿ-ಮಗಳ ಸ್ಥಿತಿ ಗಂಭೀರ: ವಿದ್ಯಾರ್ಥಿಗಳ ಪ್ರತಿಭಟನೆಗೆ ಬಸ್ ಗಾಜು ಪುಡಿಪುಡಿ

ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಬಸ್ ಅಕ್ಟ್ವಿವಾ ಬೈಕ್ ಗೆ ಗುದ್ದಿದೆ. ಪರಿಣಾಮ ತಾಯಿ-ಮಗಳು ಗಾಯಗೊಂಡಿದ್ದಾರೆ. ತೊಡಾರ್ ಮೈಟ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಬಸ್ ನ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read