BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದ ಕಾರು: ಚಾಲಕ ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಸ್ ಓವರ್ ಟೇಕ್ ಮಾಡಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊರವಲಯದಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕಾರು ಚಾಲಕನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read