BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಉದ್ಯಮಿ ಮೋಹನ್ ದಾಸ್(53) ಮೃತಪಟ್ಟವರು ಅವರು ಹುಣಸೂರಿನ ಕಲ್ಕುಣಿಕೆಯ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾರೆ.

ಆಗಸ್ಟ್ 18ರಂದು ಮನೆಯಿಂದ ಬೈಕ್ ನಲ್ಲಿ ತೆರಳಿದ ಸಂದರ್ಭದಲ್ಲಿ ಮಡಿಕೇರಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದು ಮೋಹನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಉದ್ಯಮಿ ಮೋಹನ್ ಸಾವನ್ನಪ್ಪಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read