ಹೈವೋಲ್ಟೇಜ್ ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಎಂಟ್ರಿ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಸ್ವಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಕೈಗೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅಲರ್ಟ್ ಆಗಿದ್ದು, ಇಂದು ವರುಣಾ ಕ್ಷೇತ್ರದಲ್ಲಿ ಇಡೀ ದಿನ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಡೀ ದಿನ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.

ವರುಣಾದಲ್ಲಿ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ ಅವರ ಎದುರು ಸಚಿವ ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ವಿಜಯೇಂದ್ರ ಬಿರುಸಿನ ಪ್ರಚಾರ ನಡೆಸಿದ್ದರಿಂದ ಸಿದ್ದರಾಮಯ್ಯ ಕಾರ್ಯ ತಂತ್ರ ಬದಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read