ಬೆಂಗಳೂರು: ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಪತ್ನಿ ಹಾಗೂ ಪುತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾದ ಯೋಗೇಶ್ವರ್ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಸಿ.ಪಿ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ.
ಸಿ.ಪಿ.ಯೋಗೇಶ್ವರ್ ತಮ್ಮದೇ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಕೋರ್ಟ್ ಗಳಲ್ಲಿ ಕೇಸ್ ಹಾಕುತ್ತಿದ್ದಾರೆ. ಕಾನೂನಾತ್ಮಕವಾಗಿ ನಾವು ದೂರವಾಗಿಲ್ಲ. ಆದರೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸರಿಪಡಿಸಿಕೊಡಿ ಎಂದು ಮನವಿ ಮಾಡಿದ್ದಾರೆ.