ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು ಅನುಮೋದನೆ ದೊರೆತಿದೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

ಸಚಿವರಾದವರ ಕ್ಷೇತ್ರ ಹೊರತುಪಡಿಸಿ ಉಳಿದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಿಎಂ ಸಮ್ಮತಿಸಿದ್ದಾರೆ. ಶಿವಾಜಿನಗರ, ಗೋವಿಂದರಾಜ ನಗರ, ವಿಜಯನಗರ, ಪುಲಕೇಶಿ ನಗರ, ಶಾಂತಿನಗರ ಸೇರಿದಂತೆ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲಾಗುವುದು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read