ಕೆನರಾ ಬ್ಯಾಂಕ್ ನಲ್ಲಿ ಮಲೆಯಾಳಂ ಭಾಷೆಯ ಚೆಕ್ ವಿತರಣೆ: ಗ್ರಾಹಕರ ಆಕ್ಷೇಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಲಾಗಿದೆ. ಇದರಿಂದಾಗಿ ಚೆಕ್ ನಲ್ಲಿ ಹೆಸರು ಇತರ ಮಾಹಿತಿ ಭರ್ತಿ ಮಾಡಲು ಸಾಧ್ಯವಾಗದೇ ಗ್ರಾಹಕರು ಪರದಾಡುವಂಥಾಗಿದೆ.

ಕರ್ನಾಟಕದಲ್ಲಿ ಅನ್ಯ ಭಾಷೆಯ ಚೆಕ್ ವಿತರಿಸುವುದು ಅಕ್ಷಮ್ಯವಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥ ಬ್ಯಾಂಕ್ ವ್ಯವಸ್ತಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಪರ ಹೋರಾಟಗಾರ ಅಬ್ದುಲ್ ನವೀದ್ ಒತ್ತಾಯಿಸಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬ್ಯಾಂಕ್ ಮುಂದೆ ಕನ್ನಡಪರ ಸಂಘಟನೆಗಳೊಂದಿಗೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಸಂಜೀವ ಕುಲಕರ್ಣಿ, ಶಿರಾಳಕೊಪ್ಪ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಿದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read