BIG NEWS: 10 ವರ್ಷದ ಬಾಲಕನ ಮೇಲೆ ಹರಿದು ಹೋದ ಕಾರು: ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಹತ್ತು ವರ್ಷದ ಬಾಲಕನ ಮೇಲೆ ಕಾರೊಂದು ಹರಿದು ಹೋದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಥಣಿ ಪಟ್ಟಣದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಅಥಣಿಯ ರಡ್ಡೆರಟ್ಟಿ ಗ್ರಾಮದ ಅಗಸ್ತ್ಯ ಕನಮಡಿ ಮೃತ ಬಾಲಕ. ರಸ್ತೆ ಬದಿ ಬಾಲಕ ನಡೆದು ಹೋಗುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದು, ಆತನ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದ. ಸಿಸಿಟಿವಿ ಆಧಾರದ ಮೇಲೆ ಕಾರು ಚಾಲಕ ಆರೋಪಿ ರಾಹುಲ್ ಹಂಡೇಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read