BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಹಾಗೂ ಕಾರು ಚಾಲಕ ಪೃಥ್ವಿ (36) ಮೃತ ದುರ್ದೈವಿಗಳು. ಐವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುರುಡೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯರಸ್ತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿರಲಿಲ್ಲ. ಮುಖ್ಯ ರಸ್ತೆ ಬಂದ್ ಆಗಿದ್ದರಿಂದ ಬೈಪಾಸ್ ತಿರುವು ಪಡೆಯಲು ಹೋಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read