BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ ನಂತರ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಕಾರ್ ನಲ್ಲಿ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ?, ಆತ್ಮಹತ್ಯೆಗೆ ಯತ್ನಿಸಿರಬಹುದೇ, ಅಥವಾ ಯಾರಾದರೂ  ಕೃತ್ಯವೆಸಗಿರಬಹುದೇ ಎನ್ನುವುದು ಗೊತ್ತಾಗಿಲ್ಲ. ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಲು ಪ್ರಯತ್ನ ನಡೆಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read