ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾನೂನು ಪದವೀಧರರಾಗಿರುವ ದುರ್ಗಪ್ಪ ಹೊಸಮನಿ ನಾಗರಾಳ ಗ್ರಾಮದಲ್ಲಿ ನಡೆದುಕೊಂಡು ಹೋಗುವಾಗ ಯಾವುದೇ ಕಾರಣಇಲ್ಲದೆ ಅವರನ್ನು ತಡೆದ ಮಲ್ಲಯ್ಯ ಮತ್ತು ಅರ್ಜುನ ಎನ್ನುವವರು ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಜಾತಿ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.