BREAKING : ‘ಸಂಪುಟ ಸಭೆ’ಯಲ್ಲಿ ‘ಜಾತಿವಾರು ಜನಗಣತಿ ವರದಿ’ ಮಂಡನೆ, ಪರಿಶೀಲನೆಗೆ ಸಂಪುಟ ಉಪಸಮಿತಿ ರಚನೆ.?

ಬೆಂಗಳೂರು : ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜಾತಿವಾರು ಜನಗಣತಿ ವರದಿ ಮಂಡಿಸಲು ಸಜ್ಜಾಗಿದ್ದಾರೆ.

ಹೌದು ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡಿಸಲು ಸಿದ್ದತೆ ನಡೆಸಲಾಗಿದ್ದು, ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2024 ರಲ್ಲಿ ಸಲ್ಲಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಅಂತಿಮ ವರದಿಯನ್ನು ಶುಕ್ರವಾರ ಮಂಡಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರು
ಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಸಾರ್ವಜನಿಕರ ಮನೆಮನೆಗೆ ಭೇಟಿ ನೀಡದೇ ವರದಿ ತಯಾರಿಸುವ ಈ ವರದಿ ಬಗ್ಗೆ ವಿಪಕ್ಷಗಳು ಗುಮಾನಿ ವ್ಯಕ್ತಪಡಿಸಿದೆ. ಇದನ್ನು ತಿರಸ್ಕರಿಸಬೇಕೆಂಬ ಒತ್ತಾಯಗಳು ಕೂಡ ಕೇಳಿಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read