BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಸಹಮತ ವ್ಯಕ್ತಪಡಿಸಿದೆ.

ಇದೊಂದು ರಾಜಕೀಯ ಪ್ರಕರಣ ಎಂದು ಅಭಿಪ್ರಾಯಪಟ್ಟು ಅನುಮತಿ ಹಿಂಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ.

ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ ಕುರಿತಾಗಿ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2018ರಲ್ಲಿ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿ, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಇದರ ವಿರುದ್ಧ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು.

ಈಗ ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿ ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read