BIG NEWS: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಮೊದಲು ಸಿದ್ಧತೆ ಪರಿಶೀಲನೆಗೆ ಮುಖ್ಯ ಚುನಾವಣಾ ಆಯುಕ್ತರ ನಿಯೋಗ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಪರಿವೀಕ್ಷಣೆ ಹಿನ್ನೆಲೆಯಲ್ಲಿ ಮಾರ್ಚ್ 9 ರಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಕಾಲ ಪೂರ್ವಭಾವಿ ಸಿದ್ಧತೆ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಜ್ಯದಲ್ಲಿ ಮೂರು ದಿನಗಳ ಕಾಲ ಪರಿಶೀಲನೆ ನಡೆಸಲಿದ್ದಾರೆ. ಕೇಂದ್ರ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ. ಅರುಣ್ ಗೋಯಲ್ ಮತ್ತು ಉಪ ಆಯುಕ್ತರು ಸಹ ಆಗಮಿಸಲಿದ್ದಾರೆ. ಮಾರ್ಚ್ 9 ರಂದು ಮಧ್ಯಾಹ್ನ ಕೇಂದ್ರದ ನಿಯೋಗ ಬೆಂಗಳೂರಿಗೆ ಆಗಮಿಸಲಿದೆ. 3 ದಿನ ಸಿದ್ಧತೆ ಪರಿಶೀಲನೆ ಬಳಿಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read