BREAKING : ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ‘ಲಕ್ಕೂರು ಆನಂದ’ ಇನ್ನಿಲ್ಲ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ಅವರು ನಿಧನರಾಗಿದ್ದಾರೆ.ಪೊಲೀಸರು ಇದೊಂದು ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ.

ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್ಡಿ ಮಾಡುತ್ತಿದ್ದರು.ಆನಂದ್ ಅವರ ಶವ ಆಳಂದ ತಾಲೂಕಿನ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read