ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ಬೆಂಗಳೂರಿನ ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ಮಾರ್ಚ್ 3ರಂದು ಹಗಲು ದರೋಡೆ ನಡೆದಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರ ಕದಿಯುವಾಗ ಮಹಿಳೆ ಬಿದ್ದಿದ್ದು, ಇದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಧಕ್ಕೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read