ಬಿಜೆಪಿ ಟಿಕೆಟ್ ಕೊಡಿಸುವುದಾಗಿ ‘ಚೈತ್ರಾ ಕುಂದಾಪುರ’ 3.5 ಕೋಟಿ ಹಣ ಪಡೆದಿದ್ದಾರೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಉದ್ಯಮಿಗೆ ಕೋಟ್ಯಾಂತರ ರೂ. ಹಣ ವಂಚನೆ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ, ನನಗೆ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.

ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read