ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ ಬಂಧಿತ ಆರೋಒಇಗಳು. ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲಾ ಕೋಳ್ಳೆಗಾಲ ಜೆ ಎಂ ಎಫ್ ಸಿ ಕೋರ್ಟ್ , ಆರೋಪಿಗಳನ್ನು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ತನಿಖೆ ವೇಳೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.