ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ದಸರಾ ಸಂಭ್ರಮ-ಸಡಗರದ ನಡುವೆಯೇ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ವಿಧಿವಶರಾಗಿದ್ದಾರೆ.
ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ.ರಾಜು ನಿಧನರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.