BIG NEWS: ಗಣಿ ಅಧಿಕಾರಿಗಳು ಚೇಸ್ ಮಾಡುತ್ತಿದ್ದಂತೆ ಟಿಪ್ಪರ್ ನಿಂದ ಇಳಿದು ತಪ್ಪಿಸಿಕೊಳ್ಳಲು ಓಡಿ ಹೋಗುವಾಗ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಗಣಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಟಿಪ್ಪರ್ ಚಾಲಕ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿರುವಾಗ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರಮೇಶ್ (35) ಮೃತ ಚಾಲಕ.

ಗಣಿ ಅಧಿಕಾರಿ ಸವಿತಾ ನೇತೃತ್ವದ ತಂಡ ಟಿಪ್ಪರ್ ಲಾರಿಯನ್ನು ಚೇಸ್ ಮಾಡಿದ್ದರು. ಈ ವೇಳೆ ಅಧಿಕಾರಿಗಳಿಗೆ ಹೆದರಿದ ಟಿಪ್ಪರ್ ಚಾಲಕ ಅರ್ಧರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ತಾನು ಕೆಳಗಿಳಿದು ತಪ್ಪಿಸಿಕೊಳ್ಳಲು ಓಡಿದ್ದಾನೆ. ಈ ವೇಳೆ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಲಾರಿ ಹಾಗೂ ಅಪಘಾತ ಮಾಡಿದ ಕಾರನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read