ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲ ಗುಡ್ಡ ಕುಸಿತ ಸಂಭವಿಸಿದೆ. ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ನೆಮ್ಮಾರುವಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆ ಗುಡ್ಡ ಕುಸಿದ ಜಾಗದಲ್ಲಿಯೇ ಮತ್ತೆ ಗುಡ್ಡ ಕುಸಿದಿದೆ. ಒಂದೆಡೆ ಧಾರಾಕಾರ ಮಳೆ, ಮತ್ತೊಂದೆಡೆ ಗುಡ್ಡ ಕುಸಿತವುಂಟಾಗಿದ್ದು, ಶೃಂಗೇರಿ-ಮಂಗಳೂರು ಮಾರ್ಗದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರಲು ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದ್ದು, ವಿಳಂಬವಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.