ದಾರುಣ ಘಟನೆ: ಮೈಮೇಲೆ ಬಿಸಿ ಟೀ ಬಿದ್ದು ಮಗು ಸಾವು

ಶಿವಮೊಗ್ಗ: ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆಯಲ್ಲಿ ನಡೆದಿದೆ.

ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಅವರ ಎರಡು ವರ್ಷದ ಪುತ್ರ ಅಥರ್ವ ಅಕ್ಟೋಬರ್ 24ರಂದು ಗುರುವಾರ ಮೈಮೇಲೆ ಬಿಸಿ ಟೀ ಬೀಳಿಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 8 ದಿನಗಳಿಂದ ಚಿಕಿತ್ಚೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮಗು ಮೃತಪಟ್ಟಿದೆ.

ರಾಜೇಶ್ ಅವರ ನೆರೆಮನೆಯ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ರಾತ್ರಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರಿಗೆ ರಾಜೇಶ್ ಮತ್ತು ಅವರ ಪತ್ನಿ ಟೀ ಮಾಡಿ ಪಾತ್ರೆಗೆ ಹಾಕಿ ಜಗಲಿ ಮೇಲೆ ಇಟ್ಟಿದ್ದಾರೆ. ಆಟವಾಡುತ್ತಾ ಅಲ್ಲಿಗೆ ಬಂದ ಅಥರ್ವ ಪಾತ್ರೆಯನ್ನು ಎಳೆದಿದ್ದು, ಮೈಮೇಲೆ ಬಿಸಿ ಟೀ ಚೆಲ್ಲಿ ಗಾಯಗೊಂಡಿದ್ದ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read