BIG NEWS: ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ದುರಂತ: DCP ಸೈದಲು ಅಡಾವತ್ ಗೂ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರ್ ಸಿಬಿ ವಿಜಯೋತ್ಸವ ಸಂಭ್ರಮಾಚಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಡಿಸಿಪಿ ಸೈದಲು ಅಡಾವತ್ ಗೂ ಗಂಭೀರ ಗಾಯಗಳಾಗಿವೆ.

ಜೂನ್ 4 ಬುಧವಾರ ಮಧ್ಯಾಹ್ನ ಚಿನ್ನಸ್ವಾಮಿ ಸ್ಟೆಡಿಯಂ ಗೇಟ್ ನಂ.19ರ ಬಳಿ ಉತ್ತರ ವಿಭಾಗದ ಡಿಸಿಪಿ ಸೈದಲು ಅಡಾವತ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಆರ್ ಸಿಬಿ ಅಭಿಮಾನಿಗಳ ಗುಂಪು ನುಗ್ಗಿದೆ. ಹೆಚ್ಚಿನ ಸಿಬ್ಬಂದಿ ಇಲ್ಲದ ಕಾರಣ ಡಿಸಿಪಿ ಸೈದಲು ಅವರೇ ಲಾಠಿ ಹಿಡಿದು, ಜನರನ್ನು ಚದುರಿಸಿದ್ದಾರೆ. ಆದರೆ ಜನದಟ್ಟಣೆ ಮಧ್ಯೆ ಸಿಲುಕಿಕೊಂಡಿದ್ದ ಡಿಸಿಪಿ ಸೈದಲು ಅಡಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಡಿಸಿಪಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸುದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read