ಬೆಂಗಳೂರು: ಆರ್ ಸಿಬಿ ವಿಜಯೋತ್ಸವ ಸಂಭ್ರಮಾಚಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿದ ವೇಳೆ ಡಿಸಿಪಿ ಸೈದಲು ಅಡಾವತ್ ಗೂ ಗಂಭೀರ ಗಾಯಗಳಾಗಿವೆ.
ಜೂನ್ 4 ಬುಧವಾರ ಮಧ್ಯಾಹ್ನ ಚಿನ್ನಸ್ವಾಮಿ ಸ್ಟೆಡಿಯಂ ಗೇಟ್ ನಂ.19ರ ಬಳಿ ಉತ್ತರ ವಿಭಾಗದ ಡಿಸಿಪಿ ಸೈದಲು ಅಡಾವತ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಆರ್ ಸಿಬಿ ಅಭಿಮಾನಿಗಳ ಗುಂಪು ನುಗ್ಗಿದೆ. ಹೆಚ್ಚಿನ ಸಿಬ್ಬಂದಿ ಇಲ್ಲದ ಕಾರಣ ಡಿಸಿಪಿ ಸೈದಲು ಅವರೇ ಲಾಠಿ ಹಿಡಿದು, ಜನರನ್ನು ಚದುರಿಸಿದ್ದಾರೆ. ಆದರೆ ಜನದಟ್ಟಣೆ ಮಧ್ಯೆ ಸಿಲುಕಿಕೊಂಡಿದ್ದ ಡಿಸಿಪಿ ಸೈದಲು ಅಡಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಡಿಸಿಪಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸುದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.