BIG NEWS: ಕಲುಷಿತ ನೀರಿಗೆ ನಾಲ್ವರು ಬಲಿ; AEE ಸೇರಿ ಮೂವರು ಅಮಾನತು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಚಿತ್ರದುರ್ಗದ ನಗರಸಭೆಯ ಎಇಇ, ಜೆಇ ಹಾಗೂ ವಾಲ್ವ್ ಮ್ಯಾನ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ನಗರಸಭೆಯ ಎಇಇ ಮಂಜುನಾಥ್ ಗಿರಡ್ದಿ, ಜೆಇ ಕಿರಣ್, ವಾಲ್ವ್ ಮ್ಯಾನ್ ಪ್ರಕಾಶಬಾಬು ಅಮಾನತುಗೊಂಡವರು. ಇನ್ನು ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read