BREAKING: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ವರಿಷ್ಠರ ಸಭೆ ನಡೆದು ಪಟ್ಟಿ ಸಿದ್ಧಪಡಿಸಲಾಗಿದೆ. ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾಳೆ ತಡರಾತ್ರಿ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಶಿಗ್ಗಾಂವಿಯಲ್ಲಿಯೇ ಸ್ಪರ್ಧೆ ಬಯಸಿದ್ದೇನೆ. ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಾ ಸಭೆಗಳಲ್ಲಿಯೂ ಭಾಗಿಯಾಗಿದ್ದರು. ಅಭ್ಯರ್ಥಿಗಳ ಪಟ್ಟಿ ಸಂಬಂಧ ನಿನ್ನೆ ಮತ್ತು ಇಂದು ಸುಧೀರ್ಘ ಸಭೆ ನಡೆದಿದೆ ಎಂದರು.

ಕೆಲವು ಕ್ಷೇತ್ರಗಳ ಬಗ್ಗೆ ವರಿಷ್ಠ ನಾಯಕರು ಹೆಚ್ಚಿನ ಮಾಹಿತಿ ಕೇಳಿದ್ದರು. ಈ ಕ್ಷೇತ್ರಗಳ ಸಂಬಂಧ ಗಂಭೀರ ಚರ್ಚೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಇರಲಿಲ್ಲ. ನಾಳೆ ಅವರು ದೆಹಲಿಗೆ ಬರುತ್ತಾರೆ. ಹೀಗಾಗಿ ನಾಳೆ ತಡರಾತ್ರಿ ಅಥವಾ ನಾಡಿದ್ದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read