ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ನಡುವೆ ಶಾಸಕರು, ಮಂತ್ರಿಗಳಿಗೆ ಭರ್ಜರಿ ಯುಗಾದಿ ಗಿಫ್ಟ್: ವೇತನ, ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಆರ್ಥಿಕ ಸಂಕಷ್ಟದ ಎದುರಿಸುತ್ತಿದ್ದರೂ ಮುಖ್ಯಮಂತ್ರಿ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರ ಈಗಿರುವ ವೇತನವನ್ನು ಎರಡು ಪಟ್ಟು ಹೆಚ್ಚಳ ಮಾಡುವ ಕರ್ನಾಟಕ ಶಾಸಕಾಂಗದ ವೇತನ ಪಿಂಚಣಿ ಮತ್ತು ಭತ್ಯೆ(ತಿದ್ದುಪಡಿ) ವಿಧೆಯಕ-2025ಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ಶುಕ್ರವಾರ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ವಿಧೇಯಕ ಮಂಡಿಸಲಿದೆ. ಮುಖ್ಯಮಂತ್ರಿಗಳಿಗೆ 1.50 ಲಕ್ಷ ರೂ., ಸಚಿವರುಗಳಿಗೆ 1.25 ಲಕ್ಷ ರೂ.ಗೆ ವೇತನ ಹೆಚ್ಚಳ ಆಗಲಿದೆ.

ಶಾಸಕರಿಗೆ 80 ಸಾವಿರ ರೂ., ವಿಪಕ್ಷ ನಾಯಕರಿಗೆ 80 ಸಾವಿರ ರೂ., ಸಚಿವರ ಮನೆ ಬಾಡಿಗೆ ಭತ್ಯೆ 2.50 ರೂ., ಮಾಜಿ ಶಾಸಕರ ಪಿಂಚಣಿ 50,000 ದಿಂದ 75000 ರೂ.ಗೆ ಏರಿಕೆಯಾಗಲಿದೆ. ಕ್ಷೇತ್ರ ಪ್ರವಾಸ ಭತ್ಯೆ 60 ಸಾವಿರ ರೂ.ಗೆ, ರೈಲು, ವಿಮಾನ ಟಿಕೆಟ್ ವಾರ್ಷಿಕ ಭತ್ಯೆ 3.50 ಲಕ್ಷ ರೂ.ಗೆ ಏರಿಕೆಯಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read